4th February 2025
Share
G.S.BASAVARAJ. BHUPALSING, RAJASHEKAR & KUNDARANAHALLI RAMESH

TUMAKURU:SHAKTHI PEETA FOUNDATION

ರಾಜ್ಯ ಸರ್ಕಾರ ನದಿ ಜೋಡಣೆ ವಿಚಾರದಲ್ಲಿ ಪಾದರಸದಂತೆ ಕಾರ್ಯ ನಿರ್ವಹಿಸಲು ಆರಂಭಿಸಿದೆ ಎಂದರೆ ತಪ್ಪಾಗಲಾರದು. ಕೆಳಕಂಡ ನಾಲ್ಕು ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿದೆ.

 ಈ ಎಲ್ಲಾ ಯೋಜನೆಗಳ ಬಗ್ಗೆ ದಿನಾಂಕ:08.02.2021   ರಂದು  ದೆಹಲಿಯಲ್ಲಿ ತುಮಕೂರು ಲೋಕಸಭಾ ಸದಸ್ಯ ಶ್ರೀ ಜಿ.ಎಸ್.ಬಸವರಾಜ್ ರವರ ನೇತೃತ್ವದಲ್ಲಿ NWDA DIRECTOR GENERAL ಶ್ರೀ ಭೂಪಾಲ್‌ಸಿಂಗ್‌ರವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಾಯಿತು.  ಶೀಘ್ರವಾಗಿ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

  1. ಭಧ್ರಾ ಮೇಲ್ದಂಡೆ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ.  
  2. ಎತ್ತಿನಹೊಳೆ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ.  
  3. ಭೇಡ್ತಿ ಮತ್ತು ವರದಾ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ.  
  4. ಊರಿಗೊಂದು ಕೆರೆ- ಕೆರೆಗೆ ನದಿ ನೀರು ಯೋಜನೆ ಜಾರಿ ಬಗ್ಗೆ .