27th July 2024
Share

TUMAKURU:SHAKTHIPEETA FOUNDATION

ರಾಜ್ಯದ ನೀರಾವರಿ ತಜ್ಞ ದಿ. ಎಸ್.ಜಿ ಬಾಳೆಂದ್ರಿಯವರ ಜನ್ಮ ದಿನ ದಿನಾಂಕ:05.05.1922, ಬರುವ ಮೇ 5 ಕ್ಕೆ 100 ವರ್ಷ ತುಂಬಲಿದೆ. ಇವರ ಜನ್ಮ ಶತಮಾನೋತ್ಸವವನ್ನು ಆಚರಿಸುವ ಬಗ್ಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳರವರ ಅಧ್ಯಕ್ಷತೆಯಲ್ಲಿ ದಿನಾಂಕ:17.03.2022 ರಂದು ವಿಕಾಸ ಸೌಧದಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಬಾಳೆಕುಂದ್ರಿಯವರು ಸಚಿವರಿಗೆ ಗೌರವ ಸಮರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರು, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿರವರಾದ ಶ್ರೀ ರಾಕೇಶ್‍ಸಿಂಗ್ ರವರು ಇದ್ದರು.