TUMAKURU:SHAKTHIPEETA FOUNDATION
![](https://epaper.shakthipeeta.in/wp-content/uploads/2022/01/BOMMAI-PHOTO.png)
ಮುಖ್ಯ ಮಂತ್ರಿಯವರಾದ ಶ್ರೀ ಬಸವರಾಜ್ ಬೊಮ್ಮಾಯಿರವರು 2023-2024 ರ ಆಯವ್ಯಯದಲ್ಲಿ ಪ್ರಕಟಿಸಿರುವ 247 ನೇ ಅಂಶಕ್ಕೆ ತುಮಕೂರಿನಲ್ಲಿ ಚಾಲನೆ ನೀಡಲು ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರು ಹಾಗೂ ತುಮಕೂರು ನಗರ ವಿಧಾನಸಭಾ ಸದಸ್ಯರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್ ರವರು ಮಾನ್ಯ ಮಂತ್ರಿಯವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
‘247 ನೇ ಅಂಶ: ನೀತಿ ಆಯೋಗದ ಮಾದರಿಯಂತೆ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ(SITK-STATE INSTITUE FOR TRANSFORMATION OF KARNATAKA) ಎಂದು ಪುನರ್ ರಚಿಸಲಾಗಿದ್ದು, ಈ ಸಂಸ್ಥೆಯ ಮೂಲಕ ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣಕ್ಕೆ ವಿನೂತನ ಪರಿಹಾರಗಳನ್ನು ರೂಪಿಸಲಾಗುವುದು.’
ಯೋಜನಾ ಸಚಿವರಾದ ಶ್ರೀ ಮುನಿರತ್ನರವರೊಂದಿಗೂ, ಯೋಜನಾ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿಯವರಾದ ಶ್ರೀಮತಿ ಶಾಲಿನಿ ರಜನೀಶ್ ರವರೊಂದಿಗೂ ಸಮಾಲೋಚನೆ ನಡೆಸಲಾಗುವುದು.
![](https://epaper.shakthipeeta.in/wp-content/uploads/2022/01/Capture.png)
ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಸವರಾಜ್ ಬೊಮ್ಮಾಯಿರವರು, ತುಮಕೂರಿಗೆ ಸ್ಮಾರ್ಟ್ ಸಿಟಿ ಯೋಜನೆಗಳನ್ನು ಲೋಕಾರ್ಪಣೆ ಮಾಡಲು ಆಗಮಿಸಲಿದ್ದು, ತುಮಕೂರಿನ ಮಹಾತ್ಮ ಕ್ರಿಡಾಂಗಣದ ಲೋಕಾರ್ಪಣೆ ಜೊತೆಗೆ, ಈ ಯೋಜನೆಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವ ಸಂಭಂದ, ಕೇಂದ್ರ ಸರ್ಕಾರದ ಎಲ್ಲಾ ಮಾರ್ಗಸೂಚಿಯನ್ವಯ ಸಮನ್ವಯತೆಯೊಂದಿಗೆ ಬೃಹತ್ ಸಮಾವೇಶ ನಡೆಸಲು ಉನ್ನತ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ.