18th April 2024
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ಹೆಚ್.ಎ.ಎಲ್ ಗೆ ನೀಡಿದ್ದ 610 ಎಕರೆ ಭೂಮಿ ವಿವಾದ ಹೈಕೋರ್ಟ್‌ನಲ್ಲಿರುವುದರಿಂದ ಗೋವಾದಲ್ಲಿ ಹೆಚ್.ಎ.ಎಲ್ ಘಟಕ ಸ್ಥಾಪಿಸಲು ಫಿಸಿಬಿಲಿಟಿ ರಿಪೋರ್ಟ್ ತಯಾರಿಸಲು 2015 ರಲ್ಲಿ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ಮನೋಹರ್ ಪರಿಕ್ಕರ್ ಸೂಚನೆ ಇಲಾಖಾ ಅಧಿಕಾರಿಗಳಲ್ಲಿ ತಲ್ಲಣ ಮೂಡಿಸಿತು. ಗುಬ್ಬಿ ಹೆಚ್.ಎ.ಎಲ್ ಘಟಕವನ್ನೇ ಗೋವಾಕ್ಕೆ ಶಿಪ್ಟ್ ಮಾಡುವುದು ಬಹತೇಕ ಖಚಿತ ಎಂಬ ನಿಲುವು ಎಲ್ಲರಲ್ಲೂ ಮನೆ ಮಾಡಿತ್ತು.

 ಕರ್ನಾಟಕ ರಾಜ್ಯ ಸರ್ಕಾರ ಸಮೋರಾಪಾದಿಯಲ್ಲಿ ಚುರುಕುಗೊಂಡಿತು. ಈ ಹಿನ್ನೆಲೆಯಲ್ಲಿ    ಮಾಡಲು ತುಮಕೂರಿನ ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರ ಮನವಿ ಮೇರೆಗೆ ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ಸಚಿವರಾದ ಶ್ರೀ ಮನೋಹರ್ ಪರಿಕ್ಕರ್ ರವರಿಗೆ ಕರ್ನಾಟಕ ಸರ್ಕಾರದ ಮಾನ್ಯ ಮಾಜಿ ಮುಖ್ಯ ಮಂತ್ರಿಯವರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಪತ್ರ ಬರೆದರು.